ತಾಜ್ ಮಹಮ್ಮದ್
ಸುಳ್ಯ: ಸುಳ್ಯ ಮದ್ರಸ ಮನೇಜ್ ಮೆಂಟ್ ಇದರ ವಾರ್ಷಿಕ ಸಭೆ ಡಿ.3 ರಂದು ಮದ್ರಸ ಮನೇಜ್ ಮೆಂಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅಝಾದ್ ಅಧ್ಯಕ್ಷತೆಯಲ್ಲಿ ನಡೆಯಿತು . ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಉಮರ್ ಫೈಝಿ ಸಭೆಯನ್ನ ಉದ್ಘಾಟಿಸಿ ಮಾತನಾಡಿದರು. ಅಬ್ದುಲ್ ಹಮೀದ್ ಹಾಜಿ ವಾರ್ಷಿಕ ವರದಿ ಮಂಡಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ: ಸತತ 10 ನೇ ಬಾರಿ ಅಧ್ಯಕ್ಷರಾಗಿ ತಾಜ್ ಮಹಮ್ಮದ್ ಕಲ್ಲುಗುಂಡಿ, ಪ್ರಧಾನ ಕಾರ್ಯ ದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ, ಉಪಾಧ್ಯಕ್ಷರುಗಳಾಗಿ ಯು ಹೆಚ್ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್, ಸುಪ್ರಿಂ ಅಹ್ಮದ್ ಹಾಜಿ, ಸಿ ಎಂ ಮಹಮ್ಮದ್ ಹಾಜಿ ಪೈಂಬಚ್ಚಾಲ್, ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದರ್, ಅಕ್ಬರ್ ಕರಾವಳಿ, ಎಂ ಸಿ ಅಬೂಬಕ್ಕರ್ ಕಲ್ಲುಗುಂಡಿ, ಅಬೂಬಕ್ಕರ್ ಅಜ್ಜಾವರ, ಪತ್ರಿಕಾ ಕಾರ್ಯದರ್ಶಿಯಾಗಿ ಜಮಾಲುದ್ದೀನ್ ಕೆ ಎಸ್, ಜಿಲ್ಲಾ ಪ್ರತಿನಿಧಿಗಳಾಗಿ ಹಸೈನಾರ್ ಧರ್ಮತ್ತಣ್ಣಿ, ಕತ್ತಾರ್ ಇಬ್ರಾಹೀಂ ಹಾಜಿ ಆಯ್ಕೆಗೊಂಡು ಕಾರ್ಯಕಾರಿ ಸದಸ್ಯರನ್ನ ಒಳಗೊಂಡ ಸಮಿತಿ ರಚನೆಗೊಂಡಿತು .
ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ ಎಂ ಮಹಮ್ಮದ್ ರಫೀಕ್, ದ.ಕ ಜಿಲ್ಲಾ ಮದರಸ ಮನೇಜ್ ಮೆಂಟ್ ಕಾರ್ಯದರ್ಶಿ ಶರೀಫ್ ಮುಕ್ರಂಪಾಡಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು .
ತಾಜ್ ಮಹಮ್ಮದ್ ಸ್ವಾಗತಿಸಿ, ದ.ಕ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…