MIRROR FOCUS

ಸುಳ್ಯ: ಮಲೆನಾಡ ಗಿಡ್ಡ ಹಬ್ಬ ಹಾಗೂ ರೈತ ತರಬೇತಿ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಶ್ರದ್ಧೆಯಿಂದ ಸೇವೆ ಮಾಡಿದರೆ ಸಂಪತ್ತು ಹಾಗೂ ಕೀರ್ತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಯುವ ಸಮುದಾಯ ವಿದೇಶದ ಶೋಕೀ ಜೀವನಕ್ಕೆ ಮಾರು ಹೋಗದೆ ಸ್ವದೇಶೀ ಸಂಸ್ಕೃತಿಯನ್ನು ಪ್ರೀತಿಸುವ ಕಾರ್ಯ ಮಾಡಬೇಕು. ಮಳೆ ನೀರು ಬೀಳುವ ಸ್ಥಳದ ಮೇಲೆ ಪರಿಶುದ್ಧತೆಯನ್ನು ಪಡೆಯುತ್ತದೆ. ವಿದೇಶಿ ತಳಿಗಳನ್ನು ಬಿಟ್ಟು, ನಮ್ಮ ತಳಿಗಳನ್ನು ಸಾಕಿ ಲಾಭ ಪಡೆಯುವ ಸಮಯ ಈಗ ಬಂದಿದೆ. ದೇಶೀ ದನಗಳಷ್ಟು ನಾಜೂಕು ಪ್ರಾಣಿಗಳು ಬೇರೊಂದಿಲ್ಲ, ಅವುಗಳ ದೇಹವನ್ನು ಸವರುವುದರಿಂದ ನಮ್ಮಲ್ಲಿನ ಒತ್ತಡವನ್ನು ಕಮ್ಮಿಮಾಡಿಕೊಳ್ಳಬಹುದಾಗಿದೆ ಎಂದು ಪದ್ಮಶ್ರೀ ಗಿರೀಶ್ ಭಾರದ್ವಾಜ ಹೇಳಿದರು.

Advertisement

ಅವರು ಸುಳ್ಯ ಶಿವಕೃಪಾ ಕಲಾ ಮಂದಿರದಲ್ಲಿ ರಾಷ್ಟ್ರೀಯ ಹೈನು ಸಂಶೋಧನ ಸಂಸ್ಥೆ (ಎನ್. ಡಿ. ಆರ್. ಐ.) ದಕ್ಷಿಣ ವಲಯ ಕೇಂದ್ರ ಬೆಂಗಳೂರು, ಕೆ. ಎಲ್. ಡಿ. ಎ. ನ ಎಂಇಎಫ್‌ಸಿಸಿ ಅನುದಾನಿತ ಯೋಜನೆಯ ಆಶ್ರಯದಲ್ಲಿ ಶ್ರೀಸಂಸ್ಥಾನ ಗೋಕರ್ಣ ಜಗದ್ಗುರು ಮಹಾ ಸಂಸ್ಥಾನಮ್ ಶ್ರೀರಾಮಚಂದ್ರಾಪುರಮಠ ಅಂಗಸಂಸ್ಥೆಗಳಾದ ಹವ್ಯಕ ಮಹಾಮಂಡಲ, ಕಾಮದುಘಾ ಟ್ರಸ್ಟ್, ಜೇಡ್ಲ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನಾ ಕೇಂದ್ರ, ಮಾತೃತ್ವಮ್, ಭಾರತೀಯ ಗೋಪರಿವಾರ ದಕ್ಷಿಣ ಕನ್ನಡ ಇದರ ಸಹಯೋಗದಲ್ಲಿ ನಡೆದ ಮಲೆನಾಡ ಗಿಡ್ಡ ಹಬ್ಬ ಹಾಗೂ ರೈತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Advertisement

ಬೆಂಗಳೂರು ಎನ್‌ಡಿಆರ್‌ಐ ಮುಖ್ಯಸ್ಥ ಡಾ. ಕೆ.ವಿ.ರಮೇಶ್ ಮಾತನಾಡಿ ಮಲೆನಾಡು ಗಿಡ್ಡ ತಳಿ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಸೀಮಿತವಾಗಿರುವ ವಿಶಿಷ್ಟ ಭಾರತೀಯ ಗೋ ತಳಿಯಾಗಿದ್ದು ತಾಯಿಯ ಎದೆಹಾಲು ಹೊರತುಪಡಿಸಿದರೆ ಈ ತಳಿಯ ಗೋವಿನ ಹಾಲು ಸರ್ವಶ್ರೇಷ್ಠ ಎನ್ನುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನೆಗಳಿಂದ ದೃಢಪಟ್ಟಿದೆ. ಎಲ್ಲ ತಳಿಯ ಗೋವುಗಳ ಹಾಲಿಗಿಂತ ಅಧಿಕ ಪ್ರಮಾಣದ ಲ್ಯಾಕ್ಟೋಫೆರಿನ್ ಅಂಶ ಮಲೆನಾಡು ಗಿಡ್ಡ ತಳಿಯ ಹಸುಗಳ ಹಾಲಿನಲ್ಲಿದ್ದು, ಇದು ಎಲ್ಲ ವಯೋಮಾನದವರಿಗೂ ಅತ್ಯಂತ ಆರೋಗ್ಯ ಪೂರ್ಣ ಎಂದರು.

Advertisement

ವಿಶಿಷ್ಟ ಬಣ್ಣದ ಮಲೆನಾಡ ಗಿಡ್ಡ ಗೋವುಗಳ ಪ್ರದರ್ಶನ, ಮಲೆನಾಡ ಗಿಡ್ಡ ಗೋ ಆಧಾರಿತ ಆಹಾರ ಮತ್ತು ಕೃಷಿ ಪ್ರಾತ್ಯಕ್ಷಿತೆಗಳು/ ಪ್ರದರ್ಶಿನಿಗಳು, ವಿವಿಧ ಜಾತಿಯ ಹುಲ್ಲಿನ ಪ್ರದರ್ಶನ, ಮಲೆನಾಡ ಗಿಡ್ಡ ಸಾಕುವವರಿಗೆ ಸಮ್ಮಾನ, ಮಲೆನಾಡ ಗಿಡ್ಡದ ವೈಶಿಷ್ಟ್ಯದ ಬಗ್ಗೆ ಹಾಲಿನ/ ಇತರ ಉತ್ಪನ್ನಗಳು ವಿಶೇಷತೆ ಬಗ್ಗೆ ತಜ್ಞರಿಂದ ವಿಚಾರ ಸಂಕಿರಣ, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಗೋಷ್ಠಿ, ಗೋ ಸಂದೇಶ, ಹಾಲು ಹಬ್ಬ, ಸಾತ್ವಿಕ ಆಹಾರೋತ್ಸವ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು. ಮಲೆನಾಡ ಗಿಡ್ಡದ ಹಾಲಿನಿಂದ ತಯಾರಿಸಿದ ವಿವಿಧ ಸಿಹಿತಿಂಡಿಗಳು, ಗ್ರಾಮೀಣ ತಿಂಡಿ ತಿನಿಸುಗಳು ಮತ್ತು ಹಲಸಿನ ವಿವಿಧ ತಿಂಡಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಿತು.

ನಬಾರ್ಡ್ ಎಜಿಎಂ ರಮೇಶ್ ಎಸ್., ಡಾ. ಜಯಕುಮಾರ್, ಪಶುವೈದ್ಯ ಇಲಾಖೆಯ ಡಾ. ಗುರುಮೂರ್ತಿ, ಸುಳ್ಯ ಪಶುವೈದ್ಯಾಧಿಕಾರಿ ಡಾ. ನಿತಿನ್ ಪ್ರಭು, ಕೆಎಂಎಫ್‌ನ ಡಾ. ಕೇಶವ ಸುಳ್ಳಿ, ಪ್ರೊ. ಕೃಷ್ಣ ಭಟ್, ಕಾಮದುಘಾ ಟ್ರಸ್ಟ್ ಅಧ್ಯಕ್ಷ ವೈ. ವಿ. ಕೃಷ್ಣ ಮೂರ್ತಿ, ಉಪಾಧ್ಯಕ್ಷೆ ಶೈಲಜಾ ಕೆ. ಟಿ. ಭಟ್, ಮಾತೃತ್ವಮ್ ವಿಭಾಗದ ಈಶ್ವರಿ ಬೇರ್ಕಡವು ಉಪಸ್ಥಿತರಿದ್ದರು.

Advertisement

ಮೈತ್ರಿ, ಅಶ್ವಿನಿ ಪ್ರಾರ್ಥಿಸಿದರು. ಸುಬ್ರಹ್ಮಣ್ಯ ಗಬ್ಬಲಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

3 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

3 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

3 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

4 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

13 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

13 hours ago