ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಚರಂಡಿ ಪಕ್ಕದಲ್ಲಿಯೇ ಭಜನಾ ಮಂದಿರ, ಪ್ರತಿಷ್ಠಿತ ಕ್ಯಾಂಟೀನ್ ಹಾಗೂ ಹೋಟೆಲ್ ಗಳೂ ಇವೆ.
ಸರಕಾರಿ ಆಸ್ಪತ್ರೆಯ ಮುಂಭಾಗ ಬಸ್ ತಂಗುದಾಣ ಇರುವುದರಿಂದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ನೌಕರರು ಇದೇ ರಸ್ತೆಯಲ್ಲಿ ಓಡಾಡಬೇಕು. ಕೆಟ್ಟ ವಾಸನೆಯಿಂದ ಸಂಚರಿಸಲು ಆಗುತ್ತಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತ್ಯಾಜ್ಯವನ್ನು ಹೊರತೆಗೆದು ದುರಸ್ಥಿಪಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಸುಳ್ಯ ಆಗ್ರಹಿಸಿದೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇದರ ದುರಸ್ಥಿ ಕಾರ್ಯವನ್ನು ಕೈಗೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಆಮ್ ಆದ್ಮಿ ಪಾರ್ಟಿ ಸುಳ್ಯದ ಮುಖಂಡರು ಹೇಳಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…