ಸುಳ್ಯ: ವಿಶ್ವ ಹಿಂದೂ ಪರಿಷದ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದಲ್ಲಿ ವಿಕ್ರಮ ಯುವಕ ಮಂಡಲ ಜಯನಗರ ತಂಡ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಶ್ರೀರಾಮ ಶಾಖೆ ಪೇರಾಲು ತಂಡ 80 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ವೀರಾಂಜನೇಯ ಉಬರಡ್ಕ ತಂಡ 65 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿತು. ಒಟ್ಟು 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಿಕೆಗಳನ್ನು ಒಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel