ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

December 12, 2019
9:24 PM

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ.

ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು. ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸುಳ್ಯ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಟರಾಜ ಹೊನ್ನವಳ್ಳಿಯವರನ್ನು ಸನ್ಮಾನಿಸಲಾಯಿತು. ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಪ್ರಿಯಾಂಶು ಆಶಯ ಗೀತೆ ಹಾಡಿದರು. ರಚನಾ ಕಾರ್ಯಕ್ರಮ ನಿರೂಪಿಸಿದರು. ವಕೀಲ ಕೃಷ್ಣಮೂರ್ತಿ ವಂದಿಸಿದರು.

 

ಸಂಜೆ 6.30 ರಿಂದ ನಾಟಕ ಪ್ರದರ್ಶನ: ಉದ್ಘಾಟನೆಯ ಬಳಿಕ ನಟರಾಜ ಹೊನ್ನವಳ್ಳಿ ನಿರ್ದೇಶಿಸಿ ತುಮಕೂರಿನ ಡೀಪ್ ಫೋಕಸ್ ಅಭಿನಯದ ‘ಔರಂಗಜೇಬ್’ ನಾಟಕ ಪ್ರದರ್ಶನಗೊಂಡಿತು. ಡಿ.13ರಂದು ನೀನಾಸಂ ತಿರುಗಾಟ ಅಭಿನಯದ ‘ಕರ್ಣಸಾಂಗತ್ಯ’, ಡಿ.14 ರಂದು ನೀನಾಸಂ ತಿರುಗಾಟ ಅಭಿನಯದ ರಾಕ್ಷಸ – ತಂಗಡಿ, ಡಿ.15ರಂದು ಮಂಡ್ಯ ರಮೇಶ್ ಅವರ ನಟನ ಮೈಸೂರು ಅಭಿನಯದ ‘ಹುಚ್ಚು ಖೋಡಿ ಮನಸು’ ನಾಟಕ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror