ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ.
ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು. ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸುಳ್ಯ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಟರಾಜ ಹೊನ್ನವಳ್ಳಿಯವರನ್ನು ಸನ್ಮಾನಿಸಲಾಯಿತು. ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಪ್ರಿಯಾಂಶು ಆಶಯ ಗೀತೆ ಹಾಡಿದರು. ರಚನಾ ಕಾರ್ಯಕ್ರಮ ನಿರೂಪಿಸಿದರು. ವಕೀಲ ಕೃಷ್ಣಮೂರ್ತಿ ವಂದಿಸಿದರು.
ಸಂಜೆ 6.30 ರಿಂದ ನಾಟಕ ಪ್ರದರ್ಶನ: ಉದ್ಘಾಟನೆಯ ಬಳಿಕ ನಟರಾಜ ಹೊನ್ನವಳ್ಳಿ ನಿರ್ದೇಶಿಸಿ ತುಮಕೂರಿನ ಡೀಪ್ ಫೋಕಸ್ ಅಭಿನಯದ ‘ಔರಂಗಜೇಬ್’ ನಾಟಕ ಪ್ರದರ್ಶನಗೊಂಡಿತು. ಡಿ.13ರಂದು ನೀನಾಸಂ ತಿರುಗಾಟ ಅಭಿನಯದ ‘ಕರ್ಣಸಾಂಗತ್ಯ’, ಡಿ.14 ರಂದು ನೀನಾಸಂ ತಿರುಗಾಟ ಅಭಿನಯದ ರಾಕ್ಷಸ – ತಂಗಡಿ, ಡಿ.15ರಂದು ಮಂಡ್ಯ ರಮೇಶ್ ಅವರ ನಟನ ಮೈಸೂರು ಅಭಿನಯದ ‘ಹುಚ್ಚು ಖೋಡಿ ಮನಸು’ ನಾಟಕ ಪ್ರದರ್ಶನಗೊಳ್ಳಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…