Advertisement
ಕಲೆ-ಸಂಸ್ಕೃತಿ

ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

Share

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ.

Advertisement
Advertisement

ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು. ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸುಳ್ಯ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಟರಾಜ ಹೊನ್ನವಳ್ಳಿಯವರನ್ನು ಸನ್ಮಾನಿಸಲಾಯಿತು. ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಪ್ರಿಯಾಂಶು ಆಶಯ ಗೀತೆ ಹಾಡಿದರು. ರಚನಾ ಕಾರ್ಯಕ್ರಮ ನಿರೂಪಿಸಿದರು. ವಕೀಲ ಕೃಷ್ಣಮೂರ್ತಿ ವಂದಿಸಿದರು.

 

ಸಂಜೆ 6.30 ರಿಂದ ನಾಟಕ ಪ್ರದರ್ಶನ: ಉದ್ಘಾಟನೆಯ ಬಳಿಕ ನಟರಾಜ ಹೊನ್ನವಳ್ಳಿ ನಿರ್ದೇಶಿಸಿ ತುಮಕೂರಿನ ಡೀಪ್ ಫೋಕಸ್ ಅಭಿನಯದ ‘ಔರಂಗಜೇಬ್’ ನಾಟಕ ಪ್ರದರ್ಶನಗೊಂಡಿತು. ಡಿ.13ರಂದು ನೀನಾಸಂ ತಿರುಗಾಟ ಅಭಿನಯದ ‘ಕರ್ಣಸಾಂಗತ್ಯ’, ಡಿ.14 ರಂದು ನೀನಾಸಂ ತಿರುಗಾಟ ಅಭಿನಯದ ರಾಕ್ಷಸ – ತಂಗಡಿ, ಡಿ.15ರಂದು ಮಂಡ್ಯ ರಮೇಶ್ ಅವರ ನಟನ ಮೈಸೂರು ಅಭಿನಯದ ‘ಹುಚ್ಚು ಖೋಡಿ ಮನಸು’ ನಾಟಕ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

9 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

17 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

23 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

24 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

24 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

24 hours ago