Advertisement
ಕಲೆ-ಸಂಸ್ಕೃತಿ

ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

Share

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ.

ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು. ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸುಳ್ಯ ನಗರ ಪಂಚಾಯತ್ ಸದಸ್ಯ ಬುದ್ಧ ನಾಯ್ಕ ಮುಖ್ಯ ಅತಿಥಿಗಳಾಗಿದ್ದರು. ಇದೇ ಸಂದರ್ಭದಲ್ಲಿ ನಟರಾಜ ಹೊನ್ನವಳ್ಳಿಯವರನ್ನು ಸನ್ಮಾನಿಸಲಾಯಿತು. ರಂಗಮನೆಯ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಪ್ರಿಯಾಂಶು ಆಶಯ ಗೀತೆ ಹಾಡಿದರು. ರಚನಾ ಕಾರ್ಯಕ್ರಮ ನಿರೂಪಿಸಿದರು. ವಕೀಲ ಕೃಷ್ಣಮೂರ್ತಿ ವಂದಿಸಿದರು.

 

ಸಂಜೆ 6.30 ರಿಂದ ನಾಟಕ ಪ್ರದರ್ಶನ: ಉದ್ಘಾಟನೆಯ ಬಳಿಕ ನಟರಾಜ ಹೊನ್ನವಳ್ಳಿ ನಿರ್ದೇಶಿಸಿ ತುಮಕೂರಿನ ಡೀಪ್ ಫೋಕಸ್ ಅಭಿನಯದ ‘ಔರಂಗಜೇಬ್’ ನಾಟಕ ಪ್ರದರ್ಶನಗೊಂಡಿತು. ಡಿ.13ರಂದು ನೀನಾಸಂ ತಿರುಗಾಟ ಅಭಿನಯದ ‘ಕರ್ಣಸಾಂಗತ್ಯ’, ಡಿ.14 ರಂದು ನೀನಾಸಂ ತಿರುಗಾಟ ಅಭಿನಯದ ರಾಕ್ಷಸ – ತಂಗಡಿ, ಡಿ.15ರಂದು ಮಂಡ್ಯ ರಮೇಶ್ ಅವರ ನಟನ ಮೈಸೂರು ಅಭಿನಯದ ‘ಹುಚ್ಚು ಖೋಡಿ ಮನಸು’ ನಾಟಕ ಪ್ರದರ್ಶನಗೊಳ್ಳಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago