Advertisement
ಕಲೆ-ಸಂಸ್ಕೃತಿ

ಸುಳ್ಯ: ರಂಗಮನೆ ಪ್ರಶಸ್ತಿಗೆ ಪುರುಷೋತ್ತಮ ತಲವಾಟ ಆಯ್ಕೆ

Share

ಸುಳ್ಯ :ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ನೀಡುವ 2020 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಂಗ ತಾಂತ್ರಿಕತಜ್ಞ ಪುರುಷೋತ್ತಮ ತಲವಾಟರನ್ನು ಆಯ್ಕೆ ಮಾಡಲಾಗಿದೆ ಎಂದು ರಂಗಮನೆ ಅಧ್ಯಕ್ಷರಾದ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

ದೃಶ್ಯಕಲೆಯಲ್ಲಿ ಪದವಿ ಪಡೆದ ಪುರುಷೋತ್ತಮ ತಲವಾಟರವರು ಕಳೆದ 45 ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡವರು. ರಾಜ್ಯ ಹೊರರಾಜ್ಯಗಳಲ್ಲಿ ಅನೇಕ ಪ್ರಮುಖ ನಾಟಕಗಳನ್ನು ನಿರ್ದೇಶಿಸಿದ್ದು ಮಾತ್ರವಲ್ಲ; ದೇಶದ ಪ್ರಸಿದ್ಧ ರಂಗನಿರ್ದೇಶಕರ ನಾಟಕಗಳಿಗೆ ರಂಗಸಜ್ಜಿಕೆ, ರಂಗ ಪರಿಕರ, ವಸ್ತ್ರವಿನ್ಯಾಸ, ಬೆಳಕು ಸಂಯೋಜನೆ, ಪ್ರಸಾಧನ.. ಮುಂತಾಗಿ ರಂಗಭೂಮಿಯ ಸರ್ವ ತಾಂತ್ರಿಕ ವರ್ಗದಲ್ಲಿ ದುಡಿದ ಅಪರೂಪದ ರಂಗಕರ್ಮಿಯಾಗಿದ್ದಾರೆ.

ನಾಟಕ ಮಾತ್ರವಲ್ಲದೆ ಅನೇಕ ಚಲನಚಿತ್ರ, ಟಿ.ವಿ.ಧಾರವಾಹಿಗಳಲ್ಲೂ ಅಭಿನಯಿಸಿದ್ದಾರೆ. ಹೆಗ್ಗೋಡು, ಬಿಜಾಪುರ, ಸಾಗರ, ಮಂಡ್ಯ ಮುಂತಾದೆಡೆಯ ಅನೇಕ ರಂಗಮಂದಿರಗಳಿಗೆ ಪ್ರತಿಧ್ವನಿ ನಿವಾರಣೆ ಮತ್ತು ಶಾಶ್ವತ ಬೆಳಕಿನ ವಿನ್ಯಾಸ ಮಾಡಿದ ರಾಜ್ಯದ ವಿಶೇಷ ತಾಂತ್ರಿಕ ತಜ್ಞರಿವರು. ನೀನಾಸಂ ರಂಗ ಶಿಕ್ಷಣ ಕೇಂದ್ರ, ರಾಜ್ಯದ ಎಲ್ಲ ರಂಗಾಯಣಗಳು, ಆಳ್ವಾಸ್ ರಂಗ ಶಿಕ್ಷಣ ಕೇಂದ್ರ ಮುಂತಾದೆಡೆ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದಾರೆ. ಪಾಂಡಿಚೇರಿ, ಮಧುರೈ, ಬೆಂಗಳೂರು, ಪಣಜಿ ಸೇರಿದಂತೆ ದೇಶದ ನೂರಕ್ಕೂ ಹೆಚ್ಚು ಕಡೆಗಳಲ್ಲಿ
ಪ್ರಸಾಧನ ಮತ್ತು ಮುಖವಾಡ ಕಾರ್ಯಾಗಾರಗಳನ್ನು ನಡೆಸಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರತಿಷ್ಠಿತ ಚಮನ್ ಲಾಲ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಸನ್ಮಾನಗಳು ಇವರಿಗೆ ಲಭಿಸಿವೆ.
ಇದೀಗ ರಂಗಮನೆ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು ರೂ:ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ಮಾರ್ಚ್ 1 ರಂದು ರಂಗಮನೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದ ಸಮಾರೋಪದಂದು ನೀಡಲಾಗುವುದೆಂದು ಜೀವನ್ ರಾಂ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 hour ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

3 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

9 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

10 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

17 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago