ಸುಳ್ಯ: ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಾಪಕರ ಒಕ್ಕೂಟದ ಮಹಾಸಭೆ ,ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯು ಬೆಳ್ಳಾರೆ ಹಿದಾಯತುಲ್ ಮದರಸದಲ್ಲಿ ನಡೆಯಿತು.
ಸಮಸ್ತದ ಮದರಸ ತಪಾಸಣಾಧಿಕಾರಿ ಖಾಸಿಂ ಮುಸ್ಲಿಯಾರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಉಮರ್ ಫೈಝಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ದರು.ಕಾರ್ಯ ದರ್ಶಿ ವಾರ್ಷಿಕ ವರದಿ ವಾಚಿಸಿದರು.ಮುದರ್ರಿಬ್ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಜನರಲ್ ಟಾಕ್ ನಡೆಸಿದರು .
ರೇಂಜ್ ವತಿಯಿಂದ ಹಜ್ ಯಾತ್ರೆಗೆ ತೆರಳುವ ಇಸ್ಹಾಖ್ ಬಾಖವಿ , ಅಶ್ರಫ್ ಫೈಝಿ ,ಝಕರಿಯಾ ದಾರಿಮಿಯವರನ್ನು ಬೀಳ್ಕೊಡುವ ಕಾರ್ಯ ಕ್ರಮ ನಡೆಯಿತು.
ಸಭೆಯಲ್ಲಿ ಸುಳ್ಯ ರೇಂಜ್ ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಕಲ್ಲುಗುಂಡಿ , ಕಾರ್ಯ ದರ್ಶಿ ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್ , ಕತ್ತಾರ್ ಇಬ್ರಾಹೀಂ ಹಾಜಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಹಸೈನಾರ್ ಮುಸ್ಲಿಯಾರ್ ಖಿರಾಅತ್ ಪಠಿಸಿದರು .ಕಾರ್ಯ ದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…