ಸುಳ್ಯ: ಸುಳ್ಯ ರೋಟರಿ ಕ್ಲಬ್ ಗೆ 5೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಸುಳ್ಯ ರೋಟರಿ ಕ್ಲಬ್ ನ ಆಶ್ರಯದಲ್ಲಿರುವ ಮಿತ್ತಡ್ಕ ರೋಟರಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಸುಳ್ಯ ನೂತನ ರಂಗ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್ಯದರ್ಶಿ ಗಣೇಶ್ ಭಟ್, ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ. ಪಿ.ಕೆ. ಕೇಶವ್, ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ ಭಟ್, ಶಾಲಾ ಸಂಚಾಲಕ ಜಿತೇಂದ್ರ ಎನ್.ಎ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೋತ್ತಮ ಕೆ.ಜಿ., ನಿಯೋಜಿತ ಅಧ್ಯಕ್ಷ ಡಾ. ಗುರುರಾಜ್ ವೈಲಾಯ, ನಿಯೋಜಿತ ಕಾರ್ಯದರ್ಶಿ ಲತಾ ಮಧುಸೂದನ್ ಮೊದಲಾದವರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel