ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ ನಡೆಯುತ್ತಿದ್ದ ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.
ಸಾರ್ವಜನಿಕರೂ ಇ ಮೈಲ್ ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…