ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯ ಅಧಿಕಾರಿಯಿಂದ ನಿರಂತರವಾಗಿ ನಡೆಯುತ್ತಿದ್ದ ಲಂಚಾವತಾರ, ಭ್ರಷ್ಟಾವಾರದ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋ ಸಹಿತ ವರದಿಯಾಗಿರುವುದು ರೈತರಿಗೆ ಹಾಗೂ ಶ್ರಮಿಕರಿಗೆ ಸಂತಸವಾಗಿದ್ದು, ಆ ಕಚೇರಿಯ ನೈಜ ಸಂಗತಿ ಅನಾವರಣಗೊಂಡಿದೆ. ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಈ ಲಂಚ ಹಗರಣದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮೀ ಪಕ್ಷದ ಅಶೋಕ್ ಎಡಮಲೆ ಇ ಮೈಲ್ ಮೂಲಕ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಇ ಮೈಲ್ ಮೂಲಕ ಒತ್ತಾಯಿಸಿದ್ದಾರೆ.
ಸಾರ್ವಜನಿಕರೂ ಇ ಮೈಲ್ ಅಥವಾ ಪತ್ರ ಬರೆದು ಒತ್ತಾಯ ಮಾಡಬೇಕಿದೆ. ಈ ಮೂಲಕ ಸುಳ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕಿದೆ. ಜನಪ್ರತಿನಿಧಿಗಳು ಭ್ರಷ್ಟಾಚಾರ, ಲಂಚ ಪಡೆಯುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಬೇಕಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…