Advertisement
ಸುದ್ದಿಗಳು

ಸುಳ್ಯ ಲಯನೆಸ್ ಕ್ಲಬ್‍ಗೆ ಜಿಲ್ಲೆಯಲ್ಲಿ ತೃತೀಯ ಸ್ಥಾನ

Share

ಸುಳ್ಯ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ 317-ಆ ಜಿಲ್ಲೆಯಲ್ಲಿ ಲಯನೆಸ್ ಸಂಸ್ಥೆಯ ಒಟ್ಟು 23 ಕ್ಲಬ್ ಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆಯು ಮೂರನೇ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಮಂಗಳೂರಿನ ವಾಮಂಜೂರಿನ ಚರ್ಚ್ ಹಾಲಿನಲ್ಲಿ ಜುಲೈ 13, 2019ರಂದು ನಡೆದ ಡಿಸ್ಟ್ರಿಕ್ಟ್ ಅವಾರ್ಡ್ ನೈಟ್ –“ಅಭಿನಂದನೆ – ಅಭಿವಂದನೆ” ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ಟ್ ಲಯನೆಸ್ ಅಂಬಾಸಡರ್ ಲ| ಇಂದಿರಾ ಅರುಣ್ ಶೆಟ್ಟಿ, ಮಾಜಿ ಗವರ್ನರ್ ಲ| ಅರುಣ್ ಶೆಟ್ಟಿ, ಡಿಸ್ಟ್ರಿಕ್ಟ್ ಗವರ್ನರ್ ಲ| ದೇವದಾಸ್ ಭಂಡಾರಿ, ಲ| ಸುಖಲತಾ ಭಂಡಾರಿಯವರು ಪ್ರಶಸ್ತಿಗಳನ್ನು ನೀಡಿದರು.
ಪ್ರಶಸ್ತಿಗಳನ್ನು ಸುಳ್ಯ ಲಯನೆಸ್ ಕ್ಲಬ್ಬಿನ ಅಧ್ಯಕ್ಷೆ ಲ| ತೇಜಸ್ವಿನಿ ಕಿರಣ್ ನೀರ್ಪಾಡಿ, ಖಜಾಂಜಿ ಲ| ಸೀಮಾ ಮನೋಜ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ| ರೂಪಶ್ರೀ ಜೆ. ರೈಯವರು ಪಡೆದುಕೊಂಡರು.
ಬೆಸ್ಟ್ ಲಯನೆಸ್ ಕ್ಲಬ್ ಅವಾರ್ಡ್, ಬೆಸ್ಟ್ ಸರ್ವೀಸ್ ಆಕ್ಟಿವಿಟೀಸ್ ಅವಾರ್ಡ್, ಬೆಸ್ಟ್ ಲಯನೆಸ್ ನೈಟ್ ಅವಾರ್ಡ್, ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್, ಬೆಸ್ಟ್ ಸೆಕ್ರೆಟರಿ ಅವಾರ್ಡ್, ಬೆಸ್ಟ್ ಟ್ರೆಶರರ್ ಅವಾರ್ಡ್, ಸ್ಕ್ರಾಪ್ ಬುಕ್ ಅವಾರ್ಡ್ ಇತ್ಯಾದಿ ಅವಾರ್ಡ್ ಸಂಸ್ಥೆಯ ಚಟುವಟಿಕೆಗಳ ಆಧಾರದಲ್ಲಿ ವಿತರಿಸಲಾಯಿತು. ಸುಳ್ಯ ಲಯನೆಸ್ ಕ್ಲಬ್ ಸ್ಕ್ರಾಪ್ ಬುಕ್ ಅವಾರ್ಡ್‍ನಲ್ಲಿ ದ್ವಿತೀಯ ಅಲ್ಲದೆ ಬೆಸ್ಟ್ ಪರ್‍ಫಾರ್ಮೆನ್ಸ್ ಇನ್ ಕೇರ್ ಫಾರ್ ಸ್ಪೆಶಲ್ ಚಿಲ್ಡ್ರನ್, ಇಮೇಜ್ ಬಿಲ್ಡಿಂಗ್, ಕೇರ್ ಫಾರ್ ಸೀನಿಯರ್ ಸಿಟಿಜನ್, ಎಂಪವರ್ ವುಮನ್, ಚೈಲ್ಡ್ ಕೇರ್, ಎನ್‍ವಿರಾನ್‍ಮೆಂಟ್, ಕೇರ್ ಫಾರ್ ಚಿಲ್ಡ್ರನ್, ರಿಲೀವಿಂಗ್ ಹಂಗರ್, ನೇಶನ್ ಫಸ್ಟ್, ಅಗ್ರಿಕಲ್ಚರ್, ಎಜ್ಯುಕೇಶನ್ ಮುಂತಾದ ವಿಭಾಗಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತದೆ.
ಇದಲ್ಲದೆ ಲ| ಹರಿಣಿ ಸದಾಶಿವ ಇವರಿಗೆ “ಡೈಮಂಡ್ ಸುಪ್ರೀಂ ಎಕ್ಸಲೆಂಟ್ ಅವಾರ್ಡ್”, ಲ| ನೇತ್ರಾವತಿ ಪಡ್ಡಂಬೈಲ್‍ರವರಿಗೆ ಹಾಗೂ ಲ| ಗೀತಾ ಶೆಟ್ಟಿಯವರಿಗೆ “ಸಿಲ್ವರ್ ಸುಪ್ರೀಂ ಅವಾರ್ಡ್”, ಲ| ದಿವ್ಯಾ ನಂಜೆಯವರಿಗೆ “ಸಪೋರ್ಟಿಂಗ್ ಝೋನ್ ಚೇರ್ ಪರ್ಸನ್ ಅವಾರ್ಡ್”, ಲ| ಕಮಲಾ ಬಾಲಚಂದ್ರರವರಿಗೆ “ಸಪೋರ್ಟಿಂಗ್ ಡಿಸ್ಟ್ರಿಕ್ಟ್ ಚೇರ್ ಪರ್ಸನ್ ಅವಾರ್ಡ್” ಲಭಿಸಿರುತ್ತದೆ.
ಕಾರ್ಯಕ್ರಮದಲ್ಲಿ ಸುಳ್ಯ ಲಯನ್ಸ್ ಕ್ಲಬ್ ನ 2018-19ರ ಅಧ್ಯಕ್ಷ ಲಯನ್ ಜಗನ್ನಾಥ ರೈ, ಪ್ರಸ್ತುತ ಸಾಲಿನ ಅಧ್ಯಕ್ಷ ಲಯನ್ ಗಂಗಾಧರ ರೈ, ಖಜಾಂಜಿ ಲಯನ್ ತಮ್ಮಯ್ಯ, ಲಯನ್ ಕರ್ನಲ್ ಶರತ್ ಭಂಡಾರಿ, ಲಯನ್ ರಾಧಾಕೃಷ್ಣ ಮಾಣಿಬೆಟ್ಟು, ಲಯನ್ ನಳಿನ್ ಕುಮಾರ್ ಕೋಡ್ತುಗುಳಿ, ಲಯನ್ ಶಶಿಧರ ಶೆಟ್ಟಿ, ಲಯನ್ ಗಣೇಶ್ ರೈ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

9 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

16 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

16 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

24 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago