Advertisement
ಸುದ್ದಿಗಳು

ಸುಳ್ಯ ಲಯನೆಸ್ ಕ್ಲಬ್‍ಗೆ ಜಿಲ್ಲೆಯಲ್ಲಿ ತೃತೀಯ ಸ್ಥಾನ

Share

ಸುಳ್ಯ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ 317-ಆ ಜಿಲ್ಲೆಯಲ್ಲಿ ಲಯನೆಸ್ ಸಂಸ್ಥೆಯ ಒಟ್ಟು 23 ಕ್ಲಬ್ ಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆಯು ಮೂರನೇ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಮಂಗಳೂರಿನ ವಾಮಂಜೂರಿನ ಚರ್ಚ್ ಹಾಲಿನಲ್ಲಿ ಜುಲೈ 13, 2019ರಂದು ನಡೆದ ಡಿಸ್ಟ್ರಿಕ್ಟ್ ಅವಾರ್ಡ್ ನೈಟ್ –“ಅಭಿನಂದನೆ – ಅಭಿವಂದನೆ” ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ಟ್ ಲಯನೆಸ್ ಅಂಬಾಸಡರ್ ಲ| ಇಂದಿರಾ ಅರುಣ್ ಶೆಟ್ಟಿ, ಮಾಜಿ ಗವರ್ನರ್ ಲ| ಅರುಣ್ ಶೆಟ್ಟಿ, ಡಿಸ್ಟ್ರಿಕ್ಟ್ ಗವರ್ನರ್ ಲ| ದೇವದಾಸ್ ಭಂಡಾರಿ, ಲ| ಸುಖಲತಾ ಭಂಡಾರಿಯವರು ಪ್ರಶಸ್ತಿಗಳನ್ನು ನೀಡಿದರು.
ಪ್ರಶಸ್ತಿಗಳನ್ನು ಸುಳ್ಯ ಲಯನೆಸ್ ಕ್ಲಬ್ಬಿನ ಅಧ್ಯಕ್ಷೆ ಲ| ತೇಜಸ್ವಿನಿ ಕಿರಣ್ ನೀರ್ಪಾಡಿ, ಖಜಾಂಜಿ ಲ| ಸೀಮಾ ಮನೋಜ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ| ರೂಪಶ್ರೀ ಜೆ. ರೈಯವರು ಪಡೆದುಕೊಂಡರು.
ಬೆಸ್ಟ್ ಲಯನೆಸ್ ಕ್ಲಬ್ ಅವಾರ್ಡ್, ಬೆಸ್ಟ್ ಸರ್ವೀಸ್ ಆಕ್ಟಿವಿಟೀಸ್ ಅವಾರ್ಡ್, ಬೆಸ್ಟ್ ಲಯನೆಸ್ ನೈಟ್ ಅವಾರ್ಡ್, ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್, ಬೆಸ್ಟ್ ಸೆಕ್ರೆಟರಿ ಅವಾರ್ಡ್, ಬೆಸ್ಟ್ ಟ್ರೆಶರರ್ ಅವಾರ್ಡ್, ಸ್ಕ್ರಾಪ್ ಬುಕ್ ಅವಾರ್ಡ್ ಇತ್ಯಾದಿ ಅವಾರ್ಡ್ ಸಂಸ್ಥೆಯ ಚಟುವಟಿಕೆಗಳ ಆಧಾರದಲ್ಲಿ ವಿತರಿಸಲಾಯಿತು. ಸುಳ್ಯ ಲಯನೆಸ್ ಕ್ಲಬ್ ಸ್ಕ್ರಾಪ್ ಬುಕ್ ಅವಾರ್ಡ್‍ನಲ್ಲಿ ದ್ವಿತೀಯ ಅಲ್ಲದೆ ಬೆಸ್ಟ್ ಪರ್‍ಫಾರ್ಮೆನ್ಸ್ ಇನ್ ಕೇರ್ ಫಾರ್ ಸ್ಪೆಶಲ್ ಚಿಲ್ಡ್ರನ್, ಇಮೇಜ್ ಬಿಲ್ಡಿಂಗ್, ಕೇರ್ ಫಾರ್ ಸೀನಿಯರ್ ಸಿಟಿಜನ್, ಎಂಪವರ್ ವುಮನ್, ಚೈಲ್ಡ್ ಕೇರ್, ಎನ್‍ವಿರಾನ್‍ಮೆಂಟ್, ಕೇರ್ ಫಾರ್ ಚಿಲ್ಡ್ರನ್, ರಿಲೀವಿಂಗ್ ಹಂಗರ್, ನೇಶನ್ ಫಸ್ಟ್, ಅಗ್ರಿಕಲ್ಚರ್, ಎಜ್ಯುಕೇಶನ್ ಮುಂತಾದ ವಿಭಾಗಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತದೆ.
ಇದಲ್ಲದೆ ಲ| ಹರಿಣಿ ಸದಾಶಿವ ಇವರಿಗೆ “ಡೈಮಂಡ್ ಸುಪ್ರೀಂ ಎಕ್ಸಲೆಂಟ್ ಅವಾರ್ಡ್”, ಲ| ನೇತ್ರಾವತಿ ಪಡ್ಡಂಬೈಲ್‍ರವರಿಗೆ ಹಾಗೂ ಲ| ಗೀತಾ ಶೆಟ್ಟಿಯವರಿಗೆ “ಸಿಲ್ವರ್ ಸುಪ್ರೀಂ ಅವಾರ್ಡ್”, ಲ| ದಿವ್ಯಾ ನಂಜೆಯವರಿಗೆ “ಸಪೋರ್ಟಿಂಗ್ ಝೋನ್ ಚೇರ್ ಪರ್ಸನ್ ಅವಾರ್ಡ್”, ಲ| ಕಮಲಾ ಬಾಲಚಂದ್ರರವರಿಗೆ “ಸಪೋರ್ಟಿಂಗ್ ಡಿಸ್ಟ್ರಿಕ್ಟ್ ಚೇರ್ ಪರ್ಸನ್ ಅವಾರ್ಡ್” ಲಭಿಸಿರುತ್ತದೆ.
ಕಾರ್ಯಕ್ರಮದಲ್ಲಿ ಸುಳ್ಯ ಲಯನ್ಸ್ ಕ್ಲಬ್ ನ 2018-19ರ ಅಧ್ಯಕ್ಷ ಲಯನ್ ಜಗನ್ನಾಥ ರೈ, ಪ್ರಸ್ತುತ ಸಾಲಿನ ಅಧ್ಯಕ್ಷ ಲಯನ್ ಗಂಗಾಧರ ರೈ, ಖಜಾಂಜಿ ಲಯನ್ ತಮ್ಮಯ್ಯ, ಲಯನ್ ಕರ್ನಲ್ ಶರತ್ ಭಂಡಾರಿ, ಲಯನ್ ರಾಧಾಕೃಷ್ಣ ಮಾಣಿಬೆಟ್ಟು, ಲಯನ್ ನಳಿನ್ ಕುಮಾರ್ ಕೋಡ್ತುಗುಳಿ, ಲಯನ್ ಶಶಿಧರ ಶೆಟ್ಟಿ, ಲಯನ್ ಗಣೇಶ್ ರೈ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 hour ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

1 hour ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago