Advertisement

ಸುಳ್ಯ: ಲೋಕಸಭಾ ಚುನಾವಣೆಗೆ ಸಿದ್ಧತೆ ಪೂರ್ಣ

Share

ಸುಳ್ಯ: ಲೋಕಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದಲ್ಲಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಬೆಳಿಗ್ಗೆ ಏಳರಿಂದ ಮತದಾನ ಆರಂಭವಾಗಲಿದೆ. ಸುಳ್ಯ ಕ್ಷೆತ್ರದ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಸ್ಮಾರಕ ಮಹಾವಿದ್ಯಾಲಯದಿಂದ ಬುಧವಾರ ಬೆಳಿಗ್ಗಿನಿಂದಲೇ ಮತಯಂತ್ರ, ವಿವಿ ಪ್ಯಾಟ್ ಮತ್ತು ಇತರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಗತ್ಯ ಸಾಮಾಗ್ರಿಗಳೊಂದಿಗೆ ಮಧ್ಯಾಹ್ನದ ವೇಳೆಗೆ ಮತದಾನ ಕೇಂದ್ರಗಳಿಗೆ ತೆರಳಿದರು. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ಐದು ಮಂದಿಯ ತಂಡ ಮತ್ತು ಭದ್ರತಾ ಸಿಬ್ಬಂದಿಗಳು ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದರು.


ಕ್ಷೇತ್ರದ 231 ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಭದ್ರತಾ ಸಿಬ್ಬಂದಿಗಳು ತೆರಳಿದ್ದಾರೆ. 27 ಕೆಎಸ್‍ಆರ್‍ಟಿಸಿ ಬಸ್, 37 ಜೀಪುಗಳು, 25 ವ್ಯಾನ್‍ಗಳು ಸೇರಿದಂತೆ ಒಟ್ಟು 79 ವಾಹನಗಳಲ್ಲಿ ಅಧಿಕಾರಿಗಳು ಮತಗಟ್ಟೆಗಳಿಗೆ ತೆರಳಿದರು. 18 ಮಂದಿ ಸೆಕ್ಟರ್ ಆಫೀಸರ್‍ಗಳು, ಮೂರು ಫ್ಲೈಯಿಂಗ್ ಸ್ಕ್ವಾಡ್‍ಗಳು, ಮೂರು ವೀಡಿಯೋ ಸರ್ವೆಲೆನ್ಸ್ ತಂಡಗಳು, ಐದು ಕಡೆಗಳಲ್ಲಿ ಚೆಕ್ ಪೋಸ್ಟ್‍ಗಳಲ್ಲಿ ಅಧಿಕಾರಿಗಳು ಕರ್ತವ್ಯದಲ್ಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago