Advertisement
ಸುದ್ದಿಗಳು

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಳೆಹಾನಿಗೆ ತುರ್ತು ಪರಿಹಾರಕ್ಕೆ ಕ್ರಮ – ಶಾಸಕ ಅಂಗಾರ

Share

ಸುಬ್ರಹ್ಮಣ್ಯ: ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ 69 ಮನೆಗಳು ಭಾಗಶಃ ಹಾನಿಯಾಗಿದೆ. ಕ್ಷೇತ್ರದ ಅನೇಕ ರಸ್ತೆಗಳು ಹಾನಿಗೊಳಗಾಗಿದೆ ಲೋಕೋಪಯೋಗಿ ಇಲಾಖೆಯ 13ಕೋ ರೂ ನಷ್ಟವಾದರೆ, 12 ಕೋಟಿಯಷ್ಟು ಜಿ.ಪಂ.ರಸ್ತೆ ನಾಶವಾಗಿದೆ. ಸರಕಾರಿ ಶಾಲೆ, ಸರಕಾರಿ ಕಟ್ಟಡಗಳು, ಸೇರಿ 6ಕೋ ರೂ ನಷ್ಟವಾಗಿದೆ  ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು  ಎಂದು ಶಾಸಕ ಎಸ್ ಅಂಗಾರ ಹೇಳಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೆರೆ ಸಂತ್ರಸ್ಥ ಸ್ಥಳಗಳಿಗೆ ಕಳೆದ ಆರು ದಿನಗಳಿಂದ ಭೇಟಿ ನೀಡಿ ಜನರ ಯೋಗಕ್ಷೇಮ ವಿಚಾರಿಸಿ ಅವರಿಗೆ ಸೂಕ್ತ ಪರಿಹಾರ ನೀಡುವತ್ತ ಹೆಚ್ಚಿನ ಕ್ರಮ ವಹಿಸಿದ್ದೇನೆ.ಮಾನವೀಯ ನೆಲೆಯಲ್ಲಿ ಸೂಕ್ತ ಪರಿಹಾರವನ್ನು ತುರ್ತಾಗಿ ನೆರೆ ಸಂತ್ರಸ್ಥರಿಗೆ ನೀಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸುಳ್ಯ ವಿಧಾನಸಭಾ ವ್ಯಾಪ್ತಿಯಲ್ಲಿ ಸುಮಾರು 69 ಮನೆಗಳು ಭಾಗಶಃ ಹಾನಿಯಾಗಿದೆ. ಅಲ್ಲದೆ ಈ ವ್ಯಾಪ್ತಿಯಲ್ಲಿ ಹೆಚ್ಚು ತೊಂದರೆಗೊಳಗಾದ ಮನೆಗಳಿಗೆ ಶೀಘ್ರ ಪರಿಹಾರ ಘೋಷಣೆ ಮಾಡಲಾಗುವುದು. ಅಲ್ಲದೆ ಕಲ್ಮಕಾರಿನ ಗುಳಿಕ್ಕಾನ ಪರಿಸರದ 10 ಮನೆಗಳ ಮಂದಿ ಸಂತರಸ್ಥರಾಗಿದ್ದಾರೆ.ಇವರಿಗೆ ಪಂಚಾಯತ್ ವ್ಯಾಪ್ತಿಯಲ್ಲಿನ ಸರಕಾರಿ ಜಾಗವನ್ನು ಗುರುತಿಸಿ ಶಾಶ್ವತವಾಗಿ ಪುನರ್ವಸತಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಮಂತ್ರಿ ಮಂಡಲವು ಇನ್ನೇನು ರಚಿತವಾಗಲಿದೆ. ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡುವ ನಿರ್ಧಾರವನ್ನು ಪಕ್ಷ ಮಾಡುತ್ತದೆ.ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಅಲ್ಲದೆ ಕಳೆದ 26 ವರ್ಷದಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ದುಡಿಯುತ್ತಿದ್ದೇನೆ.ಸಚಿವ ಸ್ಥಾನ ಸಿಗಬೇಕೆನ್ನುವುದು ಸುಳ್ಯದ ಜನತೆಯ ಆಶಯವಾಗಿದೆ.ಪಕ್ಷ ನೀಡಿದರೆ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.ಆದರೆ ಮಂತ್ರಿ ಮಾಡುವ ನಿರ್ಧಾರ ಪಕ್ಷದ್ದಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಹೇಳಿದರು. ಪಕ್ಷ ನಿಧಾರ ಕೈಗೊಂಡು ಮಂತ್ರಿ ಸ್ಥಾನ ದೊರಕಿದರೆ ಅದನ್ನು ನಿಭಾಯಿಸುವುದು ಒಂದು ಸವಾಲಿನ ಕೆಲಸ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಅಲ್ಲದೆ ಬಾಯಿ ಮಾತಿಗೆ ಭರವಸೆ ನೀಡದೆ ಕಾರ್ಯದ ಮೂಲಕ ಜನರ ಆಶೋತ್ತರ ಈಡೇರಿಕೆ ಮಾಡಬೇಕು ಎನ್ನುವುದು ನನ್ನ ಭಾವನೆ ಎಂದು ಶಾಸಕ ಎಸ್ ಅಂಗಾರ ಹೇಳಿದರು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ದಿನೇಶ್ ಸಂಪ್ಯಾಡಿ, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಬಿಜೆಪಿ ಮಂಡಲ ಸಮಿತಿ ಸದಸ್ಯ ಚಿದಾನಂದ ಕಂದಡ್ಕ, ಕುಕ್ಕೆ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋನಪ್ಪ ಮಾನಾಡು, ಮೋಹನರಾಂ ಸುಳ್ಳಿ, ಸುಬ್ರಹ್ಮಣ್ಯ ಭಟ್ ಮಾನಾಡು, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ಅಶೋಕ್ ಕಡಬ, ಅಶೋಕ್ ಆಚಾರ್ಯ, ಶಿವಪ್ರಸಾದ್ ಮೈಲೇರಿ, ಸುಬ್ರಹ್ಮಣ್ಯ ಕಣ್ಕಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago