ಸುಳ್ಯ : ಭಾರತೀಯ ಜೀವ ವಿಮಾ ನಿಗಮದ ವಿಮಾ ಸಪ್ತಾಹ ಸಮಾರೋಪ ಸುಳ್ಯದ ಎಲ್ಲೈಸಿ ಉಪಗ್ರಹ ಶಾಖೆಯಲ್ಲಿ ನಡೆಯಿತು.
ಸಭಾಧ್ಯಕ್ಷತೆ ವಹಿಸಿದ್ದ ಶಾಖಾಧಿಕಾರಿ ಜಿ.ಶಶಿಧರ ಹೆಗ್ಡೆ ಅವರು ಮಾತನಾಡಿ ದೇಶದ ಉದ್ದಗಲಕ್ಕೂ ಪಸರಿಸಿರುವ ಪ್ರತಿಷ್ಠಿತ ಸಂಸ್ಥೆಯಾದ ಎಲ್ಲೈಸಿ 63 ಸಂವತ್ಸರಗಳನ್ನು ಪೂರೈಸಿ ಮುನ್ನಡೆಯುತ್ತಿದೆ. ವಿಮಾ ಕ್ಷೇತ್ರದ ಉದಾರೀಕರಣ ನೀತಿಯಿಂದಾಗಿ ಉದ್ಭವಿಸಿದ ಹಲವು ಪ್ರಕ್ಷುಬ್ದ ಸನ್ನಿವೇಶಗಳನ್ನು ನಿಗಮವು ಸಮರ್ಥವಾಗಿ ನಿಭಾಯಿಸಿದೆ ಎಂದಾದರೆ ಅದಕ್ಕೆ ಗ್ರಾಹಕರು ಸಂಸ್ಥೆ ಮೇಲಿಟ್ಟಿರುವ ಪ್ರೀತಿ ವಿಶ್ವಾಸವೇ ಕಾರಣ. ನಿಮ್ಮ ಆಶೋತ್ತರಗಳಿಗೆ ಸ್ಪಂದಿಸುತ್ತಾ ಮುಂದೆಯೂ ದಕ್ಷ ಪ್ರಾಮಾಣಿಕ ಸೇವೆಯ ದೀಕ್ಷೆ ನಿರಂತರ ಮುಂದುವರಿಸುವ ಭರವಸೆ ನೀಡುತ್ತೇವೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿಗಮದ ಪ್ರತಿನಿಧಿ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರು ಶುಭ ಹಾರೈಸಿ, ವೃತ್ತಿ ಮೇಲಿನ ಗೌರವ, ಕರ್ತವ್ಯನಿಷ್ಠೆ ನಮ್ಮಲ್ಲಿ ಆತ್ಮವಿಶ್ವಾಸ ತುಂಬುತ್ತದೆ. ದುಡಿಮೆಯೊಂದಿಗೆ ಸಮಾಜಮುಖಿ ಚಿಂತನೆಯನ್ನು ಮೈಗೂಡಿಸಿಕೊಳ್ಳಿ ಎಂದರು.
ಅಭಿವೃದ್ಧಿ ಅಧಿಕಾರಿಗಳಾದ ಕೆ.ಶ್ರೀನಿವಾಸ, ಗಣೇಶ ಎಂ.ಹೆಗಡೆ, ಜಯಕುಮಾರ್ ಪಿ. ಮತ್ತು ಉಮೇಶ ನಾಯಕ್ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.ವೃತ್ತಿಸಾಧಕ ಪ್ರತಿನಿಧಿಗಳಾದ ಶಂಕರಲಿಂಗಂ ಕೆ., ಮಾಧವ ಕೆ.ಜಾಲ್ಸೂರು ಮತ್ತು ವಸಂತ ಹೊದ್ದೆಟ್ಟಿ ಅವರನ್ನು ಗೌರವಿಸಲಾಯಿತು.
ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಪ್ರತಿನಿಧಿ ಪ್ರಭಾಕರ ಎಸ್.ಎನ್. ವಂದಿಸಿದರು. ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ಶುಭ ಹಾರೈಸಿದರು. ಪ್ರತಿನಿಧಿ ಪದ್ಮನಾಭ ಶೆಟ್ಟಿ ನಿರೂಪಿಸಿದರು. ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಸಹಕರಿಸಿದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…