Advertisement
ಸುದ್ದಿಗಳು

ಸುಳ್ಯ : ವಿಶ್ವ ಸಾಕ್ಷರತಾ ದಿನಾಚರಣೆ

Share

ಸುಳ್ಯ:ಶಿಕ್ಷಣ ಮನುಷ್ಯನಿಗೆ  ಯೋಜನಾಬದ್ಧವಾಗಿ ಯೋಚಿಸುವ ಶಕ್ತಿಯನ್ನು ನೀಡಬೇಕು ಮತ್ತು ಶಿಕ್ಷಣದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮನುಷ್ಯ ಬೆಳೆಯಬೇಕು ಎಂದು  ನೆಹರು ಮೆಮೋರಿಯಲ್ ಪದವಿ   ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಅವರು ಹೇಳಿದರು.

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಮಾನವಿಕ ಸಂಘ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ   ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ನಮಗೆ ನಿಜವಾಗಿ ಬೇಕಾಗಿರುವುದು ಬದುಕಿನ ಶಿಕ್ಷಣ, ಅಂಕಗಳ ಆಕಾಂಕ್ಷೆ ಮತ್ತು ಸ್ಪರ್ಧೆಯನ್ನು ಮೀರಿ ಬೆಳೆದಾಗ ಮತ್ತು ನಮ್ಮ ಯೋಚನಾ ಲಹರಿ ಸರಿ ದಿಕ್ಕಿನಲ್ಲಿ ಸಾಗಿದಾಗ ಮಾತ್ರ ನಾವು ಪಡೆದ ಶಿಕ್ಷಣಕ್ಕೆ  ಸಾರ್ಥಕತೆ ಇರುತ್ತದೆ  ಎಂದು  ನುಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯರವರು ಮಾತನಾಡಿ  ಈ ವರುಷದ ವಿಶ್ವ ಸಾಕ್ಷರತಾ ದಿನಾಚರಣೆಯ ಧ್ಯೇಯವನ್ನು ನೆನಪಿಸಿಕೊಂಡು ನಮ್ಮ ಶಿಕ್ಷಣ  ಬಹುಭಾಷಾ ಸಿದ್ದಾಂತದ ಮೇಲೆ ಮುನ್ನಡೆಯುವ ಅಗತ್ಯತೆ ಇದೆ. ಜಾಗತೀಕರಣ  ಪ್ರಪಂಚದ ಸವಾಲುಗಳನ್ನು ಎದುರಿಸಲು ನಾವು ಪಡೆಯುವ  ಶಿಕ್ಷಣ ದಾರಿ ಮಾಡಿಕೊಡಬೇಕು ಎಂದು   ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಲಾವಿಭಾಗದ ಉಪನ್ಯಾಸಕರಾದರೇಷ್ಮಾ ಮತ್ತು  ಜಾನಕೀ ಅವರು ಉಪಸ್ಥಿತರಿದ್ದರು.

ಕಲಾ ವಿಭಾಗದ ವಿದ್ಯಾರ್ಥಿಗಳು ವೈಯಕ್ತಿಕ ಗೀತೆ, ಸಮೂಹ ಗೀತೆ ಮತ್ತು ಸಾಕ್ಷರತಾ ದಿನದ ಸಲುವಾಗಿ  ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳಾದ ಧನ್ಯ ಶ್ರೀ   ಸ್ವಾಗತಿಸಿ,  ಸಮೀಕ್ಷಾ ವಂದಿಸಿದರು. ವಿದ್ಯಾರ್ಥಿ ರವಿ  ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago