Advertisement
ಸುದ್ದಿಗಳು

ಸುಳ್ಯ : ವಿಶ್ವ ಸಾಕ್ಷರತಾ ದಿನಾಚರಣೆ

Share

ಸುಳ್ಯ:ಶಿಕ್ಷಣ ಮನುಷ್ಯನಿಗೆ  ಯೋಜನಾಬದ್ಧವಾಗಿ ಯೋಚಿಸುವ ಶಕ್ತಿಯನ್ನು ನೀಡಬೇಕು ಮತ್ತು ಶಿಕ್ಷಣದ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮನುಷ್ಯ ಬೆಳೆಯಬೇಕು ಎಂದು  ನೆಹರು ಮೆಮೋರಿಯಲ್ ಪದವಿ   ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಅವರು ಹೇಳಿದರು.

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಮಾನವಿಕ ಸಂಘ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ   ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ನಮಗೆ ನಿಜವಾಗಿ ಬೇಕಾಗಿರುವುದು ಬದುಕಿನ ಶಿಕ್ಷಣ, ಅಂಕಗಳ ಆಕಾಂಕ್ಷೆ ಮತ್ತು ಸ್ಪರ್ಧೆಯನ್ನು ಮೀರಿ ಬೆಳೆದಾಗ ಮತ್ತು ನಮ್ಮ ಯೋಚನಾ ಲಹರಿ ಸರಿ ದಿಕ್ಕಿನಲ್ಲಿ ಸಾಗಿದಾಗ ಮಾತ್ರ ನಾವು ಪಡೆದ ಶಿಕ್ಷಣಕ್ಕೆ  ಸಾರ್ಥಕತೆ ಇರುತ್ತದೆ  ಎಂದು  ನುಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯರವರು ಮಾತನಾಡಿ  ಈ ವರುಷದ ವಿಶ್ವ ಸಾಕ್ಷರತಾ ದಿನಾಚರಣೆಯ ಧ್ಯೇಯವನ್ನು ನೆನಪಿಸಿಕೊಂಡು ನಮ್ಮ ಶಿಕ್ಷಣ  ಬಹುಭಾಷಾ ಸಿದ್ದಾಂತದ ಮೇಲೆ ಮುನ್ನಡೆಯುವ ಅಗತ್ಯತೆ ಇದೆ. ಜಾಗತೀಕರಣ  ಪ್ರಪಂಚದ ಸವಾಲುಗಳನ್ನು ಎದುರಿಸಲು ನಾವು ಪಡೆಯುವ  ಶಿಕ್ಷಣ ದಾರಿ ಮಾಡಿಕೊಡಬೇಕು ಎಂದು   ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಲಾವಿಭಾಗದ ಉಪನ್ಯಾಸಕರಾದರೇಷ್ಮಾ ಮತ್ತು  ಜಾನಕೀ ಅವರು ಉಪಸ್ಥಿತರಿದ್ದರು.

ಕಲಾ ವಿಭಾಗದ ವಿದ್ಯಾರ್ಥಿಗಳು ವೈಯಕ್ತಿಕ ಗೀತೆ, ಸಮೂಹ ಗೀತೆ ಮತ್ತು ಸಾಕ್ಷರತಾ ದಿನದ ಸಲುವಾಗಿ  ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳಾದ ಧನ್ಯ ಶ್ರೀ   ಸ್ವಾಗತಿಸಿ,  ಸಮೀಕ್ಷಾ ವಂದಿಸಿದರು. ವಿದ್ಯಾರ್ಥಿ ರವಿ  ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

40 minutes ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

6 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

18 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

19 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago