ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ನೂತನ ವೃತ್ತ ನಿರೀಕ್ಷಕರಾಗಿ ರಾಜ್ಯ ಗುಪ್ತ ವಾರ್ತೆಯ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಆಗಮಿಸಲಿದ್ದಾರೆ. ನವೀನ್ ಚಂದ್ರ ಜೋಗಿ ಅವರು ಈ ಹಿಂದೆ ಲೋಕಾಯುಕ್ತ, ರಾಜ್ಯ ರೌಡಿ ನಿಗ್ರಹ ದಳ ಮತ್ತಿತರ ವಿಭಾಗದಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ.
ಆರ್.ಸತೀಶ್ ಕುಮಾರ್ ಎರಡೂವರೆ ವರ್ಷಕ್ಕಿಂತಲೂ ಹೆಚ್ಚು ಸಮಯ ಸುಳ್ಯ ವೃತ್ತ ನಿರೀಕ್ಷಕರಾಗಿದ್ದರು. ರಾಜ್ಯ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಯಶಸ್ವಿಯಾಗಿ ನೀಭಾಯಿಸಿದ್ದರು. ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಗಳನ್ನೊಳಗೊಂಡ ಸುಳ್ಯ ವೃತ್ತದ ನಿರೀಕ್ಷಕರಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಒತ್ತು ನೀಡಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…