Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

Advertisement

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

10 minutes ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

8 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

24 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

24 hours ago