Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 hour ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

9 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

9 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

18 hours ago