Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

Advertisement
Advertisement

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

10 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

11 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

19 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

20 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

20 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

20 hours ago