Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

26 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago