Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

6 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

18 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago