Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

Advertisement

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

13 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

16 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

17 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago