Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

3 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

4 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

20 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago