Advertisement
Categories: ಮಾಹಿತಿ

ಸುಳ್ಯ: ಶಾಂತಿಯುತ ಮತದಾನ :

Share

ತಾಲೂಕಿನಲ್ಲಿ ದಾಖಲೆಯ ಶೇ.84.10 ಮತದಾನ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸುಳ್ಯದಲ್ಲಿ ಶಾಂತಿಯುತ ಮತದಾನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆಯ ವೇಳೆಗೆ ಒಟ್ಟು ಶೇ.84.10 ಮತದಾನವಾಗಿದೆ. ದಾಖಲೆ ಪ್ರಮಾಣದಲ್ಲಿ ಮತದಾನ ಸುಳ್ಯ ತಾಲೂಕಿನಲ್ಲಿ ನಡೆದಿದ್ದು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾದ ತಾಲೂಕಾಗಿದೆ.
ಬೆಳಿಗ್ಗೆ ಏಳು ಗಟೆಯಿಂದ ಮತದಾನ ಕಾರ್ಯ ಆರಂಭಗೊಂಡಿದ್ದು ಕೆಲವು ಬೂತ್‍ಗಳಲ್ಲಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲು ಇತ್ತು. ಬೆಳಿಗ್ಗೆ ಬಿರುಸಿನ ಮತದಾನ ನಡೆದರೆ ಬಳಿಕ ಸರತಿ ಸಾಲು ಕಡಿಮೆಯಾಗಿ ನಿಧಾನವಾಯಿತು. ಮಧ್ಯಾಹ್ನದ ಬಳಿಕ ಮತ್ತೆ ಬಿರುಸು ಪಡೆದುಕೊಂಡಿತ್ತು. ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದ ಹಿನ್ನಲೆಯಲ್ಲಿ ಅಂತಹಾ ಕಡೆಗಳಲ್ಲಿ ಕೂಡಲೇ ಬೇರೆ ಮತ ಯಂತ್ರವನ್ನು ಒದಗಿಸಿ ಮತದಾನ ಮುಂದುವರಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಕ್ಸಲ್ ಬಾದಿತ ಬೂತ್‍ಗಳಲ್ಲಿ, ಸೂಕ್ಷ್ಮ ಮತಗಟ್ಟೆಗಳಲ್ಲಿಯೂ ಬಿರುಸಿನ ಮತದಾನ ನಡೆಯಿತು. ಜನರು ನಿರಾಂತಕವಾಗಿ ಮತದಾನ ಮಾಡಿದರು. ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೇಂದ್ರೀಯ ಮೀಸಲು ಪಡೆ, ಪೊಲೀಸ್, ಗೃಹ ರಕ್ಷಕ ದಳ ಭದ್ರತೆಯನ್ನು ಒದಗಿಸಿತು. ಕ್ಷೇತ್ರದಲ್ಲಿ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಯಿತು. 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸಿದ್ದರು.

13 ಕಡೆ ವೆಬ್ ಕಾಸ್ಟಿಂಗ್:
13 ಬೂತ್‍ಗಳಲ್ಲಿ ವೆಬ್ ಕಾಸ್ಟಿಂಗ್, 15 ಬೂತ್‍ಗಳಲ್ಲಿ ವೀಡಿಯೋಗ್ರಾಫಿ ಮಾಡಲಾಯಿತು. 58 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.
ಬೆಳಿಗ್ಗೆ ಎಲ್ಲಾ ಮತಗಟ್ಟೆಗಳಲ್ಲೂ ಉದ್ದದ ಸರತಿ ಸಾಲಿದ್ದು ಬಿರುಸಿನ ಮತದಾನ ನಡೆದರೆ ಬಳಿಕ ನಿಧಾನವಾಯಿತು. ಮಧ್ಯಾಹ್ನ ಒಂದು ಗಂಟೆ ಗಂಟೆಯ ವೇಳೆಗೆ ಶೇ.53.13 ಮತದಾನವಾಗಿತ್ತು. ಮಧ್ಯಾಹ್ನ ಮೂರು ಗಂಟೆಗೆ ಶೇ.65.04 ಮತದಾನವಾಗಿತ್ತು. ಕೆಲವು ಬೂತ್‍ಗಳಲ್ಲಿ ಮಧ್ಯಾಹ್ನದ ಬಳಿಕ ಮತ್ತು ಚುನಾವಣಾ ಸಮಯ ಮುಗಿಯುವ ವೇಳೆಗೆ ಮತದಾನ ಬಿರುಸುಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

13 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago