ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…