ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…