ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…