ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…