ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…