ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…