ಸುಳ್ಯ: ನಿರಂತರ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಯಾಗಿರುವ ಸುಳ್ಯದ ಎಸ್.ಅಂಗಾರರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಎಂ.ಬಾಬು ಜಾಲ್ಸೂರು ಶಾಸಕರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ತಪ್ಪಿದೆ. ಸಚಿವರಾಗುತ್ತಿದ್ದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತಿತ್ತು. ಆದ್ದರಿಂದ ಇನ್ನಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಸ್ಥಾನ ನೀಡದೇ ಇದ್ದರೆ ಎಲ್ಲ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ. ಸಚಿವ ಸ್ಥಾನ ತಪ್ಪಿರುವುದಕ್ಕೆ ಜಿಲ್ಲೆಯ ಇತರ ಶಾಸಕರು, ಮುಖಂಡರು ಕೂಡಾ ಧ್ವನಿ ಎತ್ತದಿರುವುದು ಬೇಷರ ತಂದಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮೋನಪ್ಪ ರಾಜಾರಾಂ ಪುರ, ಕಾರ್ಯದರ್ಶಿ ದಿಲೀಪ್ ಕೊಡಿಯಾಲಬೈಲು, ಖಜಾಂಜಿ ಮಲ್ಲೇಶ್ ಕುಡೆಕಲ್ಲು, ವಿಜಯ ಆಲಡ್ಕ, ಚಂದ್ರಕಾಂತ ಮೂಡಾಯಿತೋಟ, ಜಗನ್ನಾಥ, ಕೇಶವ ಕಲ್ಪಡ ಉಪಸ್ಥಿತರಿದ್ದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…