ಸುಳ್ಯ: ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ವತಿಯಿಂದ ಶಿವಳ್ಳಿ ಬಾಂಧವರಿಂದ ನೃತ್ಯ, ಹಾಡು, ನಾಟಕ, ಯಕ್ಷಗಾನ ಮೊದಲಾದ ವೈವಿಧ್ಯಮಯ ಕಾರ್ಯಕ್ರಮ ಇಲ್ಲಿನ ಶ್ರೀಗುರು ರಾಘವೇಂದ್ರ ಮಠದ ಆವರಣದಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ ವಹಿಸಿ ಕಲಾವಿದರಿಗೆ ಶುಭ ಹಾರೈಸಿದರು. ಖ್ಯಾತ ಮಿಮಿಕ್ರಿ ಕಲಾವಿದ ಪಟ್ಟಾಬಿರಾಮ ಸುಳ್ಯ ಅವರನ್ನು ಪತ್ರಕರ್ತ ಗಂಗಾಧರ ಮಟ್ಟಿ ಸಮ್ಮಾನಿಸಿ, ಪಟ್ಟಾಭಿ ಅವರ ಪ್ರತಿಭೆ ಇದೀಗ ರಾಜ್ಯವ್ಯಾಪಿ ಹರಡಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಇವರಿಗೆ ಮುಂದೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ದೊರೆಯಲಿ ಎಂದು ಅಭಿನಂದಿಸಿದರು. ಸುಮತಿ ಪಟ್ಟಾಭಿ ಅವರನ್ನು ಪುರಸ್ಕರಿಸಲಾಯಿತು.
ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಪ್ರಥಮ್ ಮೂಡಿತ್ತಾಯ ಸ್ವಾಗತಿಸಿ, ಹರಿಕೃಷ್ಣ ನಾವಡ ವಂದಿಸಿದರು. ಸೌಮ್ಯ ಸೋಮಯಾಗಿ ಸಮ್ಮಾನ ಪತ್ರ ವಾಚಿಸಿದರು. ಸುಳ್ಯ, ಸುಬ್ರಹ್ಮಣ್ಯ ಮತ್ತು ಪಂಜದ ಶಿವಳ್ಳಿ ಘಟಕದ ಸದಸ್ಯರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…