ಸುಳ್ಯ ಶ್ರೀಗಣೇಶೋತ್ಸವ ಉದ್ಘಾಟನೆ

September 4, 2019
9:15 AM

ಸುಳ್ಯ : ಈ ಹಿಂದೆ ಸ್ವಾತಂತ್ರ ಸಮರಕ್ಕೆ ಧುಮುಕಲು ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಸಾಮೂಹಿಕ ಗಣೇಶೋತ್ಸವವನ್ನು ಆಚರಣೆಗೆ ತಂದರು. ಇದೀಗ ಸಾರ್ವತ್ರಿಕವಾಗಿ ಸಾರ್ವಜನಿಕ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿದ್ದು, ಮತ್ತೆ ದೇಶ ಬಲಿಷ್ಠಗೊಳ್ಳಲು ಇದು ಸಹಕಾರಿ ಎಂದು ಶಾಸಕ ಎಸ್.ಅಂಗಾರ ತಿಳಿಸಿದರು.

Advertisement

ಅವರು ಸುಳ್ಯದ ಶ್ರೀಸಿದ್ಧಿ ವಿನಾಯಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀದೇವತಾರಾಧನಾ ಸಮಿತಿ ವತಿಯಿಂದ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀಗಣೇಶೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ನೂತನ ಗಣೇಶ ಗುಡಿ ನಿರ್ಮಾಣ ಕಾರ್ಯ ಆದಷ್ಟು ಬೇಗ ಕೈಗೂಡಲಿ ಎಂದರು.

ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾ„ಕಾರಿ ಡಾ|ಭಾನುಮತಿ ವಿ. ಶುಭ ಹಾರೈಸಿದರು. ಗೌರವಾಧ್ಯಕ್ಷ ಕೆ.ಎಸ್.ಚಂದ್ರಶೇಖರ್, ಪೂರ್ವಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ, ಅಧ್ಯಕ್ಷ ಎಸ್.ಗುರುದತ್ ಶೇಟ್, ಪಿ.ಕೆ.ಉಮೇಶ್, ಡಾ|ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು.

ಡಿ.ಟಿ.ದಯಾನಂದ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ.ಜೆ. ನಿರೂಪಿಸಿ, ವಂದಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ
April 29, 2025
8:00 AM
by: ದ ರೂರಲ್ ಮಿರರ್.ಕಾಂ
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group