ಸುಳ್ಯ : ಈ ಹಿಂದೆ ಸ್ವಾತಂತ್ರ ಸಮರಕ್ಕೆ ಧುಮುಕಲು ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಸಾಮೂಹಿಕ ಗಣೇಶೋತ್ಸವವನ್ನು ಆಚರಣೆಗೆ ತಂದರು. ಇದೀಗ ಸಾರ್ವತ್ರಿಕವಾಗಿ ಸಾರ್ವಜನಿಕ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿದ್ದು, ಮತ್ತೆ ದೇಶ ಬಲಿಷ್ಠಗೊಳ್ಳಲು ಇದು ಸಹಕಾರಿ ಎಂದು ಶಾಸಕ ಎಸ್.ಅಂಗಾರ ತಿಳಿಸಿದರು.
ಅವರು ಸುಳ್ಯದ ಶ್ರೀಸಿದ್ಧಿ ವಿನಾಯಕ ಸೇವಾ ಸಮಿತಿ ಮತ್ತು ಸಾರ್ವಜನಿಕ ಶ್ರೀದೇವತಾರಾಧನಾ ಸಮಿತಿ ವತಿಯಿಂದ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀಗಣೇಶೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ನೂತನ ಗಣೇಶ ಗುಡಿ ನಿರ್ಮಾಣ ಕಾರ್ಯ ಆದಷ್ಟು ಬೇಗ ಕೈಗೂಡಲಿ ಎಂದರು.
ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾ„ಕಾರಿ ಡಾ|ಭಾನುಮತಿ ವಿ. ಶುಭ ಹಾರೈಸಿದರು. ಗೌರವಾಧ್ಯಕ್ಷ ಕೆ.ಎಸ್.ಚಂದ್ರಶೇಖರ್, ಪೂರ್ವಾಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ, ಅಧ್ಯಕ್ಷ ಎಸ್.ಗುರುದತ್ ಶೇಟ್, ಪಿ.ಕೆ.ಉಮೇಶ್, ಡಾ|ಲೀಲಾಧರ್ ಡಿ.ವಿ. ಉಪಸ್ಥಿತರಿದ್ದರು.
ಡಿ.ಟಿ.ದಯಾನಂದ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ.ಜೆ. ನಿರೂಪಿಸಿ, ವಂದಿಸಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…