Advertisement
ಧಾರ್ಮಿಕ

ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

Share

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

12 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

16 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

20 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

20 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago