ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಿತು.
ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.
ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…