Advertisement
ಧಾರ್ಮಿಕ

ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

Share

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago