Advertisement
ಧಾರ್ಮಿಕ

ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

Share

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago