Advertisement
ಧಾರ್ಮಿಕ

ಸುಳ್ಯ : ಶ್ರೀ ಗುರುರಾಯರ ಆರಾಧನಾ ಮಹೋತ್ಸವ

Share

ಸುಳ್ಯ: ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ  ನಡೆಯಿತು.

ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಸಂಜೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ ಮತ್ತು ಪಂಜದ ಶಿವಳ್ಳಿ ಸಂಪನ್ನ ಮಹಿಳಾ ಘಟಕದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ತೊಟ್ಟಿಲ ಸೇವೆ ನಡೆಯಿತು. ನೂತನವಾಗಿ ಗುರುಗಳಿಗೆ ತೊಟ್ಟಿಲನ್ನು ನೀಡಿದ ಕೃಷ್ಣ ನಾವಡ ಮತ್ತು ರವಿರಾಜ ನಾವಡ ಅವರನ್ನು ಹಾಗೂ ಚಪ್ಪರಕ್ಕೆ ಧನ ಸಹಾಯ ನೀಡಿದ ಕೇಶವ ಕೇಕುಣ್ಣಾಯ ಅವರನ್ನು ಗೌರವಿಸಲಾಯಿತು. ಅಷ್ಟಾವಧಾನ, ಸೇವೆಯಲ್ಲಿ ವೇದ, ವ್ಯಾಕರಣ, ಕಾವ್ಯ, ಜೋತಿಷ್ಯದಲ್ಲಿ ವೇದಮೂರ್ತಿಗಳಾದ ಶ್ರೀಹರಿ ಎಳಚಿತ್ತಾಯ, ಶ್ರೀವರ ಪಾಂಗಾಣ್ಣಾಯ, ಅರಂಬೂರು ಭಾರದ್ವಾಜ ಆಶ್ರಮದ ವೇದಪಾಠ ಶಾಲೆಯ ಪ್ರಾಂಶುಪಾಲ ವೇದಮೂರ್ತಿ ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು ಸಹಕರಿಸಿದರು.ಸಂಗೀತದಲ್ಲಿ ಕೃತಿಕಾ ಶಗ್ರಿತ್ತಾಯ, ಭಜನೆಯಲ್ಲಿ ಜಯಪ್ರಕಾಶ ಕಾಯರ್ತೋಡಿ, ಭರತನಾಟ್ಯದಲ್ಲಿ ಪೂರ್ವಿಕೃಷ್ಣ , ಚೆಂಡೆವಾದನ ಸುಮಂತ್ ಮತ್ತು ಸಮರ್ಥ ಕಡಂಬಳಿತ್ತಾಯ, ನಾಟಕದಲ್ಲಿ ತುಷಾರ ಗೌಡ ಸುಳ್ಯ ಮತ್ತು ಸಾಯಿ ನಕ್ಷತ್ರ, ಶೇಖರ ಮಣಿಯಾಣಿ ನೇತೃತ್ವದ ಮಹಾವಿಷ್ಣು ಚಿಕ್ಕಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಿತು. ಅಷ್ಟಾವಧಾನವನ್ನು ಪ್ರಕಾಶ್ ಮೂಡಿತ್ತಾಯ ಸಂಘಟಿಸಿದ್ದು, ಸುಧನ್ವಕೃಷ್ಣ, ಪ್ರಥಮ ಮೂಡಿತ್ತಾಯ, ಅನುಷಾ ಭಾರ್ಗವಿ ಸಹಕರಿಸಿದರು.

ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಮತ್ತು ಇತರ ಟ್ರಸ್ಟಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

7 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

11 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

11 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

21 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

21 hours ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…

1 day ago