ಸುಳ್ಯ: ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆ ರಸ್ತೆ ಪರಿಸ್ಥಿತಿ ಇದು..!. ಸರ್ ಪ್ಲೀಸ್ ಇದನ್ನೊಮ್ಮೆ ನೋಡ್ತೀರಾ ? ಯಾವಾಗಲಾದರೊಮ್ಮೆ ಇದನ್ನೊಮ್ಮೆ ದುರಸ್ತಿ ಮಾಡಿಸ್ತೀರಾ ? ಹೀಗೆ ಪ್ರಶ್ನೆ ಕೇಳ್ತಿದಾರೆ ಜನ…!
ಸುಳ್ಯದ ಮುಖ್ಯ ರಸ್ತೆ ಯಿಂದ ಆಸ್ಪತ್ರೆ ಗೆ ಬರುವ ರಸ್ತೆಯನ್ನು ನೋಡಿದರೆ ಆಸ್ಪತ್ರೆಯ ಮುಂಭಾಗವೇ ಕಿತ್ತು ಹೋಗಿದೆ. 90% ಆಸ್ಪತ್ರೆ ಬರುವ ಜನಸಾಮಾನ್ಯರ ದೈಹಿಕ ಕ್ಷೀಣ ಪರಿಸ್ಥಿತಿಯಲ್ಲಿ ಈ ಇಳಿಜಾರು ಅವೈಜ್ಞಾನಿಕ ರಸ್ತೆ ಏರುವುದು ಇಳಿಯುವುದೇ ಕಠಿಣ, ಅದರ ನಡುವೆ ಕಿತ್ತು ಹೋದ ರಸ್ತೆ ಬಡಜನತೆಯ ಶಾಪಕ್ಕೆ ತುತ್ತಾಗಬೇಕಿದೆ ನಗರ ಆಡಳಿತ ಅದಲ್ಲದೇ ಹಲವಾರು ಸಮಸ್ಯೆ ಗಳಿವೆ ತಿಳಿಸಿದರೆ ಮುಗಿಯದ ಗೋಳು . ಜನಪ್ರಿಯ ಶಾಸಕರು ಸಂಸದರು . ಅದಲ್ಲದೇ ಉಸ್ತುವಾರಿಸಚಿವರು ಹಲವಾರು ಬಾರಿ ಸುಳ್ಯ ಕ್ಕೆ ಭೇಟಿ ನೀಡುವಾಗ ತಮ್ಮ ಧರ್ಮದ, ತಮ್ಮ ಪಕ್ಷದ ಕಾರ್ಯಕ್ರಮಗಳೇ ಹೆಚ್ಚಾಯಿತೇ?
ಜನಸಾಮಾನ್ಯರಿಗೆ ಉಪಯೋಗವಾಗುವ ಆಸ್ಪತ್ರೆ ತಮ್ಮ ದೃಷ್ಟಿ ಗೆ ಕಾಣದಾಯಿತೆ? ಕಣ್ಣಿದ್ದು ಕರುಡರಾದರೇ? ರಾಷ್ಟ್ರೀಯ ಪಕ್ಷಗಳ ಸ್ವಯಂ ಘೋಷಿತ ನಾಯಕರು ಗಳೇ ತಮಗೂ ನಾಚಿಕೆ ಮಾನ ಮರ್ಯಾದೆ ಜವಾಬ್ದಾರಿ, ಕರ್ತವ್ಯ ಇಲ್ಲದಾಯಿತೆ?
ಎಷ್ಟೋ ಬಡಜನರ ದೇವಾಲಯ ಆಸ್ಪತ್ರೆ ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲಾಗದ ಈ ನಾಚಿಕೆ ಗೇಡಿನ ಸಾಂಪ್ರದಾಯಿಕ ಪಕ್ಷ ರಾಜಕೀಯ ಜನ ಸಾಮಾನ್ಯರಿಗೆ ಅಗತ್ಯವಿದೆಯೇ?
ಕಾಂಕ್ರೀಟ್ ರಸ್ತೆ ಮಾಡಿ ಶಾಶ್ವತ ಪರಿಹಾರಕ್ಕೆ ಆಸ್ಪತ್ರೆ ಭೇಟಿ ನೀಡುವ ಸುಳ್ಯದ ಬಡನತೆಯ ಕರುಳಿನ ರೋಧನವಾಗಿದೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ, ಸಾಮಾಜಿಕ ಆರ್ಥಿಕ ಹಿಂದುಳಿದ ಜನರ ಮೇಲೆ ಶೋಷಣೆಯ ಪ್ರತೀಕವಾಗಿದೆ.
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…