ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

October 3, 2019
9:31 AM

ಸುಳ್ಯ:ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ. 2 ರಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗಾಂಧಿ ಜಯಂತಿ ಆಚರಣೆ ನಡೆಯಿತು. ಗಾಂಧಿ ಚಿಂತನವನ್ನು ನಡೆಸಿ ಕೊಟ್ಟ ಹಿಂದಿ ವಿಭಾಗದ ಮುಖ್ಯಸ್ಥರಾದ ರಾಮಕೃಷ್ಣ ಕೆ.ಎಸ್. ಅವರು, ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಗಾಂಧಿ ಚಿಂತನೆಗಳ ಬಗೆಗಿನ ಒಲವು ಕಡಿಮೆಯಾಗುತ್ತಿದೆ ಹಾಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅವರು ಮಾತನಾಡಿ, ಯುವಜನತೆಯಲ್ಲಿ ಗಾಂಧಿಜಿಯವರ ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸುವ ಕೆಲಸವಾಗಬೇಕು ಎಂದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸತೀಶ್ ಕುಮಾರ್ ಕೆ. ಆರ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಯೋಜನಾಧಿಕಾರಿಗಳಾದ ಶ್ರೀಮತಿ ಸುರೇಖಾ ಹೆಚ್, ಹಾಗೂ ಧನರಾಜ್ ಕುಮಾರ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಮಿತಾ ನಿರೂಪಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೊಡಿಯಾಲಬೈಲಿನಿಂದ ಸುಳ್ಯದ ವರೆಗಿನ ರಸ್ತೆಯ ಬದಿಯ ಸ್ವಚ್ಛತೆ ನಡೆಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror