ಸುಳ್ಯ:ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ. 2 ರಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗಾಂಧಿ ಜಯಂತಿ ಆಚರಣೆ ನಡೆಯಿತು. ಗಾಂಧಿ ಚಿಂತನವನ್ನು ನಡೆಸಿ ಕೊಟ್ಟ ಹಿಂದಿ ವಿಭಾಗದ ಮುಖ್ಯಸ್ಥರಾದ ರಾಮಕೃಷ್ಣ ಕೆ.ಎಸ್. ಅವರು, ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಗಾಂಧಿ ಚಿಂತನೆಗಳ ಬಗೆಗಿನ ಒಲವು ಕಡಿಮೆಯಾಗುತ್ತಿದೆ ಹಾಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅವರು ಮಾತನಾಡಿ, ಯುವಜನತೆಯಲ್ಲಿ ಗಾಂಧಿಜಿಯವರ ಆದರ್ಶಗಳ ಬಗ್ಗೆ ಅರಿವನ್ನು ಮೂಡಿಸುವ ಕೆಲಸವಾಗಬೇಕು ಎಂದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸತೀಶ್ ಕುಮಾರ್ ಕೆ. ಆರ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಯೋಜನಾಧಿಕಾರಿಗಳಾದ ಶ್ರೀಮತಿ ಸುರೇಖಾ ಹೆಚ್, ಹಾಗೂ ಧನರಾಜ್ ಕುಮಾರ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಮಿತಾ ನಿರೂಪಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೊಡಿಯಾಲಬೈಲಿನಿಂದ ಸುಳ್ಯದ ವರೆಗಿನ ರಸ್ತೆಯ ಬದಿಯ ಸ್ವಚ್ಛತೆ ನಡೆಸಲಾಯಿತು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…