ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…