ಸುಳ್ಯ: ಸುಳ್ಯ ಸಿ.ಎ. ಬ್ಯಾಂಕ್ ವತಿಯಿಂದ ಮಣ್ಣಿನ ಫಲವತ್ತತೆ ಮತ್ತು ಲಾಭದಾಯಕ ಕೃಷಿ ಕುರಿತು ಮಾಹಿತಿ ಕಾರ್ಯಾಗಾರ ಮೇನಾಲ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಾಗಾರವನ್ನು ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ಸಿ. ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಿರಾಜಪೇಟೆ ಎಸ್ಎಲ್ಎನ್ ಗ್ಲೋಬಲ್ ಸಂಸ್ಥೆಯ ವಿಷ್ಣು ಮೂರ್ತಿ ಜಿ ರಾವ್ ಮಾಹಿತಿ ನೀಡಿದರು. ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ, ಕೃಷಿಕರಾದ ಕಿರಣ್ ರೈ ಮೇನಾಲ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ ವೇದಿಕೆಯಲ್ಲಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel