ಸುಳ್ಯ ಹವ್ಯಕ ವಲಯದ ವತಿಯಿಂದ ದುರ್ಗಾಪೂಜೆ

October 1, 2019
11:01 AM

ಸುಳ್ಯ: ಸುಳ್ಯ ಹವ್ಯಕ ವಲಯದ ವತಿಯಿಂದ  ಗಣಪತಿ ಹವನ, ಲಲಿತಾ ಹವನ ಹಾಗೂ ದುರ್ಗಾಪೂಜೆ ಕಾರ್ಯಕ್ರಮಗಳನ್ನು ಸುಳ್ಯದ ” ಶಿವ ಕೃಪಾ” ಕಲಾಮಂದಿರದಲ್ಲಿ ನಡೆಸಲಾಯಿತು.

ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ಇವರು ಧ್ವಜಾರೋಹಣವನ್ನು ನಡೆಸಿದರು, ವಲಯದ ಕಾರ್ಯದರ್ಶಿಯಾದ ವಿಷ್ಣು ಕಿರಣ ನೀರಬಿದ್ರೆ ಇವರು ಫಲ ಸಮರ್ಪಿಸಿ ಶಂಖನಾದದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ವಲಯದ ವತಿಯಿಂದ ದುರ್ಗಾ ಪೂಜೆಯನ್ನು ಡಾಕ್ಟರ್ ನಾರಾಯಣ ಭಟ್ ಕಲ್ಚಾರ್ ದಂಪತಿಗಳು  ಗಣಪತಿ ಹವನ, ಲಲಿತಾ ಹವನವನ್ನು ಕುಂಜತ್ತೋಡಿ ರಮೇಶ್ ಭಟ್ ದಂಪತಿಗಳು ನೆರವೇರಿಸಿದರು. ವಲಯ ವೈದಿಕ ಪ್ರಧಾನರಾದ ವೇದಮೂರ್ತಿ ಕೃಷ್ಣ ಭಟ್ ಅರಂಬೂರು ಮತ್ತು ಮಂಡಲ ವೈದಿಕ ಪ್ರಧಾನರಾದ ವೆಂಕಟೇಶ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಿದವು.

ಮಹಾಮಂಡಲದ ಮಾತೃತ್ವ ವಿಭಾಗದ ಅಧ್ಯಕ್ಷರಾದ  ಈಶ್ವರಿ ಶ್ಯಾಂ ಭಟ್ ಬೇರ್ಕಡವು ಇವರು ಮಾತೃತ್ವ ವಿಭಾಗದ ಕಾರ್ಯಾಚರಣೆಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ವಿಷ್ಣು ಗುಪ್ತ ವಿಶ್ವವಿದ್ಯಾಪೀಠ ಮುಳ್ಳೇರಿಯ ಮಂಡಲದ ನಿರ್ದೇಶಕರಾದ ಪ್ರೊ. ಟಿ. ಶ್ರೀಕೃಷ್ಣ ಭಟ್ ಅವರು ವಿಶ್ವವಿದ್ಯಾಪೀಠ ಬಗ್ಗೆ ಮಾಹಿತಿಗಳನ್ನು ನೀಡಿದರು ಈ ಸಂದರ್ಭದಲ್ಲಿ ಮಂಡಲದ ಮಾತೃ ಪ್ರಧಾನೆ ಕುಸುಮ ಪೆರ್ಮುಖ ಅವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror